Skip to main content

Posts

ಸ್ಪೂರ್ತಿ

ಮುಂಜಾನೆ ಎದ್ದು ಸ್ನಾನ ಮಾಡಿ ಬಂದು ಮೊಬೈಲ್ ನೋಡಿದರೆ ಆರು ಮಿಸ್ಸ್ಡ್ ಕಾಲ್ಸ್ ಇದ್ವು. ಕರೆ ಮಾಡಿದೆ. ಆಚೆಯಿಂದ "ಅಕ್ಕ ಇವತ್ತು ಏಕ್ಸಾಮ್ ಬರೀಲೀಕ್ಕೆ ಬರ್ತಿದ್ದೀರಿ ತಾನೇ ?" ಎಂದು  ಹುಡುಗಿ ಗಾಬರಿ ಸ್ವರದಲ್ಲಿ ಕೇಳಿದಳು. "ಹೌದು ! ಹೊರಡ್ತಿದ್ದೀನಿ." ಎಂದು ಸಮಾಧಾನಿಸಿ ಫೋನ್ ಪಕ್ಕಕ್ಕಿಟ್ಟು, ಬೇಗನೆ ತಯಾರಾಗಿ ರೂಮಿನಿಂದ ಹೊರಡಿದೆ. ಅದು ೪೫ ನಿಮಿಷಗಳ ಪ್ರಯಾಣ. ಅಷ್ಟರಲ್ಲಿ ಮೂರ್ನಾಲ್ಕು ಸಲ ನಾನು ಎಲ್ಲಿದ್ದೀನಿ ಎಂದು ವಿಚಾರಿಸಲು ಕರೆ ಮಾಡಿದ್ದಳು. ೮:೪೫ ಗೆ ತಲುಪಬೇಕಿತ್ತು. ೮:೩೦ ಗೆ ನೇ ತಲುಪಿದ್ದೆ. ಕಾಲೇಜು ಹೊರಗೆ ತನ್ನ ಗೆಳತಿಯೊಟ್ಟಿಗೆ ಕಾದು ನಿಂತಿದ್ದಳು.  "ಹಾಯ್, ಸ್ಪೂರ್ತಿ ತಾನೇ ? " ಅಂದೆ. "ಹೌದಕ್ಕಾ, ಬಂದ್ರಾ. ಹೇಗೆ ಪರಿಚಯವಾಯ್ತು . ನಾವು ಎಂದೂ ಭೇಟಿಯಾಗಿಲ್ಲ ಅಲ್ವಾ" ಎಂದಾಗ, ಅಲ್ಲಿರುವ ಜನರಿಗಿಂತ ಭಿನ್ನವಾಗಿ ಅವಳು ಇದ್ದುದ್ದರಿಂದ ಪರಿಚಯವಾಯ್ತು ಎಂದು ಹೇಳಲು ಮನಸ್ಸಾಗಲಿಲ್ಲ. ಸುಮ್ನೆ ಅವಳ ಬೆನ್ನು ತಟ್ಟಿ ನಕ್ಕು ಬಿಟ್ಟೆ. "ಸಾರೀ ಅಕ್ಕ, ತುಂಬಾ ಸಲ ಕಾಲ್ ಮಾಡಿದೆ. ಮೊನ್ನೆ ನನ್ನ ಗೆಳತಿಗೆ ಒಬ್ರು ಏಕ್ಸಾಮ್ ಬರೀಲಿಕ್ಕೆ ಬರ್ತೇನೆ ಹೇಳಿ ಬಂದಿರ್ಲಿಲ್ಲ. ಅದ್ಕೆ ಗಾಬರಿಯಾಗಿದ್ದೆ " ಅಂದ್ಲು. ಕಾಲೇಜು ಒಳಗೆ ಹೋಗಿ ರೂಮ್ ಹುಡುಕಿ ಅಲ್ಲಿ ಕೂತು ಮಾತಾಡಲು ಶುರು ಮಾಡಿದ್ವಿ. ಸ್ವಲ್ಪ ಹೊತ್ತಾದ ನಂತರ ಸ್ಪೂರ್ತಿ ಹಾಗು ಅವಳ ಗೆಳತಿಯಂತೆ ಏಳೆಂಟು ಜನ ತಮ್ಮ ಬ

ಮೊಬೈಲ್ ಕ್ಯಾಮೆರಾದಲ್ಲಿ ಭೂತಕೋಲ !!

ಬೆಳಿಗ್ಗೆ ಎದ್ದಕೂಡಲೇ ಸರಿಯಾಗಿ ಕಣ್ಣು ಬಿಟ್ಟಿರದಿದ್ದರು,  ನಮ್ಮ ಕೈ ಮಾತ್ರ  ಮೊಬೈಲಿಗಾಗಿ ಹುಡುಕಾಡಲು ಶುರು ಮಾಡುತ್ತೆ. ಅರೆಬರೆ ನಿದ್ದೆಯಲ್ಲೂ ಬೇರೆಯವರ ಸ್ಟೇಟಸ್ ನೋಡುವ ಕುತೂಹಲ. ಪಕ್ಕದಲ್ಲಿ ಕೂತವರಿಗೆ ಗುಡ್ ಮಾರ್ನಿಂಗ್ ಹೇಳುವ ಬದಲು ಸಾವಿರಾರು ಮೈಲಿ ದೂರವಿದ್ದ ನೂರಾರು ಜನಕ್ಕೆ ಮುಂಜಾನೆಯ ಶುಭಾಷಯ ಕಳಿಸಿ ಏಳುವುದು ನಮ್ಮ ದಿನಚರಿಯಾಗಿದೆ. ಸ್ಟೇಟಸ್ ಅಲ್ಲಿರುವ ಟಿಕ್ ಟಾಕ್ ವಿಡಿಯೋಗಳು ಇಂದು ನಮಗೆ ಸುಪ್ರಭಾತ. ಹೀಗೆ ಬೆಳಿಗ್ಗೆ ಕಣ್ಣು ಬಿಟ್ಟಾಗಿನಿಂದ ರಾತ್ರಿ ಕಣ್ಣು ಮುಚ್ಚುವವರೆಗೂ, ದೈನಂದಿನ ಕೆಲಸದ ನಡುವೆಯೂ ಮೊಬೈಲ್ ನೋಡುತ್ತಾ ದಿನ ಕಳೆಯುತ್ತೇವೆ. ಕಳೆದ ವಾರ ನಮ್ಮೂರಲ್ಲಿ  ನಡೆಯುವ ಭೂತಕೋಲಕ್ಕೆ ಹೋಗಿದ್ದೆ. ದಕ್ಷಿಣ ಕನ್ನಡ ಉಡುಪಿ ಪ್ರದೇಶಗಳಲ್ಲಿ ದೇವರನ್ನು ನಂಬಿದಷ್ಟೇ ಭೂತವನ್ನು ಜನರು ನಂಬುತ್ತಾರೆ. ಕೆಲಸಕ್ಕೆಂದು ಪರ ಊರಲ್ಲಿ ನೆಲೆಸಿದ್ದರೂ, ವರ್ಷಕ್ಕೊಮ್ಮೆ ನಡೆಯುವ ಈ ಧಾರ್ಮಿಕ ಆಚರಣೆಗೆ ಎಲ್ಲರೂ ತಾವು ಹುಟ್ಟಿ ಬೆಳೆದ ಊರಿಗೆ ಬರುವುದುಂಟು. ಸಣ್ಣದಿರುವಾಗ ಐಸ್ಕ್ರೀಮ್, ಚರ್ಮುರಿ ತಿನ್ನಲು ಹಣ ಸಿಗುತ್ತದೆಂದು ಭೂತಕೋಲಕ್ಕೆ ಹುಮ್ಮಸ್ಸಿನಿಂದ ಹೋಗುತ್ತಿದ್ದೆ. ಹೈಸ್ಕೂಲಿಗೆ ಬಂದ ನಂತರ, ಭೂತಕೋಲ ವೆಲ್ಲ ಮೂಢನಂಬಿಕೆ, ಪಾತ್ರಿಗಳು ಚೆಂಡೆ, ಬ್ಯಾಂಡಿನ ಶಬ್ದಕ್ಕೆ ಹಾಗೆ ನಲಿಯುದೆಂದು ಅಮ್ಮನಿಗೆ ಹೇಳಿದ್ದುಂಟು. ಆಗ ಅಮ್ಮ, ವಿಜ್ಞಾನ ಕಲಿತಕೂಡಲೇ ನಮ್ಮ ಪೂರ್ವಜರು ನಂಬಿಕೊಂಡು ಬಂದ ಸಂಪ್ರದಾಯವನ್ನು ಮರೀಬೇಡಿ ಎಂದು ತಿಳಿ ಹ
ಬೇಸಿಗೆ ರಜೆ ಬಂತೆಂದರೆ ಸಾಕು ಎಂದು ಎಲ್ಲರೂ ಕಾಯುತಿದ್ದರೆ, ನಾನು ರಜೆ ಸಿಕ್ಕರೆ ಶಾಲೆ ಶುರುವಾಗಲು ಕಾಯುತಿದ್ದೆ. ಶಾಲೆಗೆ ಹೋದರೆ ಒಂದು ಘಂಟೆಯಾದ್ರೂ ಆಡಲು ಅವಕಾಶ ಇತ್ತು. ಈಗ ದೊಡ್ಡವಳಾದ್ರಿಂದ ಮನೆಯಲ್ಲಿ ಕುಣಿದು ಕುಪ್ಪಳಿಸಿ ಆಡಲು ಅವಕಾಶವಿರಲಿಲ್ಲ. ಹುಡುಗಿ ದೊಡ್ಡವಳಾದ ಮೇಲು , ಹೊರಗೆ ಹೋಗಿ ಆಡಿದ್ರೆ ಊರಿನವರು ಏನು ಹೇಳಿಯಾರು ಎಂಬ ಭಯ.  ಬೆಳಿಗ್ಗೆಯಾದ್ರೆ ಅಮ್ಮನಿಗೆ ಮನೆ ಕೆಲಸದಲ್ಲಿ ಸಹಾಯ ಮಾಡಿಯಾದ್ರು ಸಮಯ ಹೋಗುತಿತ್ತು. ಮಧ್ಯಾಹ್ನ ಅಮ್ಮ ಮಲಗಿದ್ರೆ ಏನು ಮಾಡಬೇಕೆಂದು ತೋಚುತ್ತಿರಲಿಲ್ಲ. ಮನೆಯಲ್ಲಿ ಕೂರಲು ಬೇಜಾರು. ಇದ್ದ ಕಥೆ ಪುಸ್ತಕಗಳನ್ನೆಲ್ಲ  ಆಗಲೇ ಮೂರ್ನಾಲ್ಕು ಸಲ ಓದಿ ಆಗಿರುತ್ತಿತ್ತು. ಏನು ಮಾಡಬೇಕೆಂದು ತೋಚದಿದ್ದಾಗ , ಕಾಣಿಸಿದ್ದು ವಿವಾಹದ ಆಮಂತ್ರಣ ಪತ್ರಿಕೆಗಳು ಹಾಗು ಹಳೆ ಪುಸ್ತಕಗಳ ರಟ್ಟುಗಳು. ವಿವಿಧ ಶೈಲಿಗಳ ಆಮಂತ್ರಣ ಪತ್ರಿಕೆಗಳನ್ನು ಒಟ್ಟು ಹಾಕಿ, ಅವುಗಳನ್ನು ಕತ್ತರಿಸುತ್ತಾ ಏನಾದ್ರು ಒಂದು ಮಾಡಿ ಸಮಯ ಕಳೆಯುತ್ತಿದ್ದೆ. ಅಮ್ಮ ನಿದ್ದೆ ಯಿಂದ ಎದ್ದ ಕೂಡಲೇ, ಇನ್ನು ಮದುವೆ ಸಮಾರಂಭ ಮುಗಿಯದ ಪತ್ರಿಕೆಗಳನ್ನು ಹರಿದಿದಕ್ಕೆ ಬೈಗುಳ ತಿನ್ನುವುದು ರೂಢಿಯಾಗಿತ್ತು. ಹೀಗೆ ಸಣ್ಣ ಪುಟ್ಟ ಕರಕೌಶಲಗಳನ್ನು ಮಾಡುತ್ತಾ, ಕತೆ ಪುಸ್ತಕ ಓದುತ್ತ, ಹಳೆ ಬುಕ್ಕುಗಳ ರಟ್ಟು ಹಿಡ್ಕೊಂಡು ಕಂಪ್ಯೂಟರ್ ಮಾಡುತ್ತಾ, ಹಿಂದಿನ ತರಗತಿಯ ಪುಸ್ತಕಗಳಲ್ಲಿ ಇದ್ದ ಚಿತ್ರಗಳನ್ನು ಕತ್ತರಿಸಿ ಒಂದು ಪುಸ್ತಕದಲ್ಲಿ ಅಂಟಿಸುತ್ತಾ  ನನಗೆ ಮ

ಎಮರ್ಜೆನ್ಸಿ ಕಾಂಟ್ಯಾಕ್ಟ್ಸ್

ಮಹಿಳಾ ದಿನಾಚರಣೆ !  ವಾಟ್ಸಪ್ಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಎಲ್ಲಿ ನೋಡಿದರು ಹೆಣ್ಣಿನ ಜೀವನ, ಅವಳ  ತ್ಯಾಗ, ತಾಳ್ಮೆ, ನೋವಿನ ಬಗ್ಗೆಯೇ ತುಂಬಿ ತುಳುಕುತ್ತಿದೆ. ವಿಶ್ ಮಾಡಿದವರಿಗೆ ರಿಪ್ಲೈ ಮಾಡಿ, ಮಹಿಳಾ ದಿನಾಚರಣೆ ಆಚರಿಸುವುದು ಸರಿಯೋ ತಪ್ಪೋ ಎಂದು ಮನದಲ್ಲೇ ಚರ್ಚಿಸುತ್ತ ಆಫೀಸಿಗೆಂದು ಹೊರಟೆ. ಆಫೀಸ್ ಗೇಟ್ ಅಲ್ಲಿ ಸೆಕ್ಯೂರಿಟಿ ಗಾರ್ಡ್ಸ್ ಮುಗುಳ್ನಗುತ್ತ "ಹ್ಯಾಪಿ ವುಮೆನ್ಸ್ ಡೇ" ಎಂದು ವಿಶ್ ಮಾಡಿ ಒಂದು ಬ್ಯಾಡ್ಜ್ ಕೈಗಿತ್ತರು. ಒಂದು ಕಡೆಯಲ್ಲಿ ಹೆಣ್ಣಿನ ಚಿತ್ರವಿದ್ದರೆ  ಇನ್ನೊಂದು ಕಡೆಯಲ್ಲಿ "ಎಮರ್ಜೆನ್ಸಿ ಕಾಂಟ್ಯಾಕ್ಟ್ಸ್ " ಇದ್ವು. ಅದು ಮಹಿಳಾ ದಿನಾಚರಣೆಗೆ ಸಿಕ್ಕಿದ ಗಿಫ್ಟ್ ಆಗಿತ್ತು. ಅಯ್ಯೋ ಇಷ್ಟೇನಾ ಎಂದುಕೊಂಡೆ, ಆದರು ಎಲ್ಲೊ ಮನದಲ್ಲಿ ಇದೆ ಇಂದಿನ ದಿನಗಳಲ್ಲಿ ಬಲು ಅವಶ್ಯವಾದದು ಎಂದೆನಿಸಿತು. ಒಂದು ಕೋಣೆಯಲ್ಲಿ ಒಬ್ಬಳು ಇರಲು ಹೆದರುತ್ತಿದ್ದವಳು ನಾನು. ಎಲ್ಲಿ ಕರೆಂಟ್ ಹೋಗಿ ಕತ್ತಲೆ ಯಲ್ಲಿ ಭೂತ ಕಾಣಿಸುವುದೋ ಎಂಬ ಭಯ. ಇನ್ನೊಂದು ಕೋಣೆ ಯ ದೀಪ ಆರಿಸಿ ಬಾ ಎಂದು ಅಮ್ಮ ಹೇಳಿದರೆ ನನ್ನಿಂದ ಆಗದು ಎನ್ನುತ್ತಿದ್ದೆ. ಆದರೆ ಇಂದು ಜನರಿಂದ ತುಂಬಿ ತುಳುಕುತ್ತಿರುವ ಜಾಗದಲ್ಲಿದ್ದರು ಹಗಲಲ್ಲೂ ಹೆದರಿಕೆ. ಭೂತದಲ್ಲ ಮನುಷ್ಯರದು. ಮುಂಚೆ ರಸ್ತೆ ದಾಟುವಾಗ ಜಾಗೃತೆ ಎಂದು ಹೇಳಿ ಕಳುಹಿಸುತ್ತಿದ್ದರು ಅಮ್ಮ , ಇಂದು ರೋಡ್ ದಾಟಿ ಅಪಾರ್ಟ್ಮೆಂಟ್  ಗೇಟ್ ಒಳಗಿದ್ದೇನೆ ಎಂದರು ಅಮ್ಮ, ಮನೆ ತಲುಪಿದ ಕೂ

ಫೀಸ್ ಜಾಸ್ತಿಯಾಗಲು ಕಾರಣ ಪಾಪದವರು ವಿದ್ಯಾವಂತರಾಗ ಬೇಕೆನ್ನುವುದರಿಂದ ಅಂತೆ !!!

ಅದೊಂದು ಸಮಾರಂಭದಲ್ಲಿ ನನ್ನ ಸುತ್ತಮುತ್ತ  ಕೆಲವು ಹೆಂಗಸರು ಕೂತು ಮಾತಾಡುತ್ತಿದ್ದರು. ಹೆಂಗಸು ೧ : (ಪಕ್ಕದಲ್ಲಿ ಕೂತಿದ್ದ ಹುಡುಗಿಯನ್ನ ) "ಏನಮ್ಮ ಏನ್ ಕಲಿತಿದ್ದೀಯಾ ?" ಹೆಂಗಸು ೨ : "ಅವಳನ್ನ ಇಂಜಿನಿಯರಿಂಗ್ ಗೆ ಸೇರಿಸಿದ್ದೀವಿ. ಇನ್ನು ಮುಂದಿನ ವಾರ ಕ್ಲಾಸ್ಸ್ ಸ್ಟಾರ್ಟ್ ಆಗುತ್ತೆ." ಮಗಳಿಗೆ ಕೇಳಿದ ಪ್ರಶ್ನೆಗೆ ತಾಯಿ ಉತ್ತರಿಸಿದರು. ಮಗಳು ತನ್ನ ಮೊಬೈಲ್ ಲೋಕದಲ್ಲಿ ಮುಳುಗಿ ಹೋಗಿದ್ದಳು. ತನ್ನ ಸುತ್ತಮುತ್ತ ಇರುವ ಜನರನ್ನ ಮಾತಾಡಿಸುವದಕ್ಕಿಂತ ಪೊಕೀಮೋನ್ ಹಿಡಿಯುದರಲ್ಲಿ ಬ್ಯುಸಿ ಆಗಿದ್ದಳು. ಹೆಂಗಸು ೧ : "ಒಹ್! ಹಾಗೇನು .ಅಂದ್ರೆ  ಪಿಯುಸಿ ಯಲ್ಲಿ ಒಳ್ಳೆ ಮಾರ್ಕ್ಸ್ ಬಂದಿರ್ಬೇಕಲ್ಲ? ಒಳ್ಳೇದು ." ಹೆಂಗಸು ೨ : "ಇಲ್ಲ ಕಣ್ರೀ . ಫೇಲ್ ಆಗಿದ್ರು ಫೇಲ್ ಆದ್ಲು ಎಂದು ಹೇಳೋಕ್ಕೆ ನಾನು ಸಂಕೋಚ ಪಡ್ತಿರ್ಲಿಲ್ಲ. ಅಷ್ಟು ಕಮ್ಮಿ ಮಾರ್ಕ್ಸ್ ತೆಗ್ದಿದ್ದಾಳೆ ನೋಡಿ. ನಮಗೆ ಅವಳು ಇಂಜಿನಿಯರಿಂಗ್ ಮಾಡಬೇಕೆಂಬುದು ಆಸೆ. ಬಿ ಎಸ್ಸಿ ಎಲ್ಲ ಕಲಿತರೆ ಏನು ಸಿಗ್ತದೆ ಹೇಳಿ. ಹಾಗೆ ಮಂಗಳೂರಲ್ಲೇ ಒಂದು ಕಾಲೇಜು ಗೆ  ಮ್ಯಾನೇಜ್ಮೆಂಟ್ ಸೀಟ್ ಅಲ್ಲಿ ಆರ್ಕಿಟೆಕ್ಚರ್ ಗೆ ಸೇರಿಸಿದ್ದೀವಿ. ಈ ಕೋರ್ಸ್ ಗೆ ಸೇರಿದ್ರೆ ೨ ಸಲ ಟೂರ್ ಗೆ ಹೋಗಬಹುದು ಅಂತ ಅವಳ ಗೆಳೆಯರು ಹೇಳಿದ್ದಾರಂತೆ. " ಹೆಂಗಸು ೧: "ಅದಕ್ಕೇನಂತೆ ಬಿಡಿ. ಇರುವುದು ಒಬ್ಬಳು ಮಗಳು ,  ಕಲೀಲಿ. " ಹೆಂಗಸು ೨: "ಏನೋ ಅವ

ಕ್ಷಮಿಸಿ ಟೀಚರ್ ...!

ಆವತ್ತು ಎಂದಿನಂತೆ ಕಾಲೇಜಿಗೆ ಹೋಗಲು ಬಸ್ಸಿಗೆ ಕಾಯುತ್ತಿದ್ದೆ. ಅದು ಯಾವತ್ತೂ ಮರೆಯದ ದಿನವಾಗುತ್ತದೆಂದು ಕನಸಲ್ಲೂ ಎಣಿಸಿರಲಿಲ್ಲ . ತಪ್ಪು ಎನ್ನುವುದಕ್ಕಿಂತ ಏನೋ ಪಾಪ ಮಾಡಿದ್ದೇನೆ ಎಂಬ ಭೀತಿ ಇಂದಿಗೂ ನನ್ನನ್ನು ಕಾಡುತ್ತಿದೆ. ನನ್ಮುಂದೆ ಬಸ್ಸೊಂದು ನಿಂತಿತ್ತು. ಶಾಲಾ ಮಕ್ಕಳು ಪ್ರವಾಸಕ್ಕೆ ಹೊರಟಿರುವುದೆಂದು ಬಸ್ಸು ನೋಡಿದಾಗ  ತಿಳಿಯಿತು. ನಾನೋ ಇದನೆಲ್ಲ ನೋಡುತಿದ್ದರು ನನ್ನ ಮನಸ್ಸು ಏನೋ ಬೇರೆ ಕಡೆಯೇ ತೇಲಿದಂತ ಅನುಭವ. ಆ ಬಸ್ಸಿನ ಕಿಟಕಿಯಿಂದ  ಸುಮಾರು ಇಪ್ಪತೆಂಟು ಮೂವತ್ತು ವರ್ಷದ ಹುಡುಗಿಯೊಬ್ಬಳು ನನ್ನ ಕಡೆ ನೋಡಿ ಕೈ ಬೀಸಿದಂತೆ ಆಯ್ತು. ಆದರೆ ಯಾರೆಂಬುದು ನನಗೆ ತಿಳಿಯಲೇ ಇಲ್ಲ. ನನ್ನ ನೋಡಿ ಕೈ ಬೀಸಿದಳೋ ಅಲ್ಲ ಪಕ್ಕದಲ್ಲಿರುವವರಿಗೆ ಸನ್ನೆ ಮಾಡುತಿದ್ದಳೊ ತಿಳಿಯಲಿಲ್ಲ.ಆಚೆ ಈಚೆ ನೋಡಿದರೆ ಯಾರು ಅವಳಿಗೆ ಪ್ರತಿಕ್ರಿಯಿಸುತ್ತಿರಲಿಲ್ಲ. ಮತ್ತೆ ಅವಳು ನನ್ನನ್ನೇ ನೋಡ್ತಿದಂತೆ ಅನಿಸಿತು. ಏನು ಯೋಚಿಸುತಿದ್ದೆನೋ ದೇವರಿಗೆ ಗೊತ್ತು. ನಾನು ಅವಳಿಗೆ ಪ್ರತಿಕ್ರಿಯಿಸಲೇ  ಇಲ್ಲ. ನಾನು ಅವಳಿಗೆ ಕೈ ಬೀಸುತಿದ್ದರೆ  ನನ್ನ ಗಂಟೇನು  ಹೋಗುತಿತ್ತು ಎಂದು ಇವತ್ತಿನವರೆಗೂ  ನನ್ನನು ನಾನು ಎಷ್ಟು ಬಾರಿ ಬೈದುಕೊಂಡಿದ್ದೇನೋ ಏನೋ. ಸ್ವಲ್ಪ ಹೊತ್ತಾದ ನಂತರ ಯಾರೋ ಬಸ್ಸಿನಿಂದ ಇಳಿದಂತಾಯ್ತು.  ಇಳಿದವಳನ್ನು ನೋಡಿ ಅವಾಕ್ಕಾದೆ . ನಾನು ಕಲಿತ ಶಾಲೆಯಲ್ಲೇ ನನ್ನ ಕಸಿನ್ ಓದುತ್ತಿದ್ದಳು . ಅವಳು ಬಸ್ಸಿನಿಂದ ಇಳಿದಂತೆ ಕಿಟಕಿ ಬದಿಯಲ್ಲಿದ್ದ

ಹೀಗೆ ಒಂದು ದಿನ ಕನಸಲ್ಲಿ ಕಂಡ ನನ್ನ ಕನಸಿನ ಗುಡಿಸಲು

ಕೃಪೆ : ಗೂಗಲ್ ಇಮೇಜ್ಸ್                       ಮಳೆ ಹನಿಗಳು  ಕಿಟಕಿ ಗಾಜಿಗೆ ಬೀಳುವ ಸದ್ದು ಕೇಳಿ ಎಚ್ಚರವಾಯ್ತು. ಕಣ್ಣು ಬಿಟ್ಟಾಗ ಅಲ್ಲೇ ಮೇಜಲ್ಲಿಟ್ಟ ಬುದ್ಧನ ಮುಗುಳ್ನಗೆ, ಪಕ್ಕದಲ್ಲಿರುವ ಕೃಷ್ಣಾರ್ಜುನರ  ರಥದ ಮಾದರಿ ಕಂಡರೆ  ಏನೋ ಮನಸ್ಸಿಗೆ ಮುದ ನೀಡುವುದು . ಚಿಕ್ಕಂದಿನಿಂದ ಅವೆರಡನ್ನು ಕೊಳ್ಳುವ ಆಸೆ. ಆದರೆ ಎಲ್ಲಿಯೂ ನನಗೆ ಬೇಕಂತಿರುವುದು ಸಿಕ್ಕಿರಲಿಲ್ಲ. ಕಳೆದ ವರ್ಷ ಉಡುಗೊರೆಯಾಗಿ ಪಡೆದಿದ್ದೆ.  ಪರದೆ ಸರಿಸಿ ಕಿಟಕಿ ಹೊರಗೆ ನೋಡಿದ್ರೆ ನಾ ನೆಟ್ಟ ಗುಲಾಬಿ  ಗಿಡದಲ್ಲಿದ್ದ ಒಂದು ಗುಲಾಬಿ ನನ್ನ ನೋಡಿ ನಕ್ಕಂತೆ ಕಾಣುತಿತ್ತು. ಹೂವೆಂದರೆ  ಪಂಚಪ್ರಾಣ. ಮಲ್ಲಿಗೆಯ ಸುವಾಸನೆ, ಗುಲಾಬಿಯ  ಸೌಂದರ್ಯ ಪದಗಳಲ್ಲಿ  ವರ್ಣಿಸಲು ಅಸಾಧ್ಯ.  ಮಳೆ ಬಿದ್ದಾಗ  ಆ ಮಣ್ಣಿನ ಸುವಾಸನೆ ನನ್ನನ್ನು ಮನೆಯಿಂದ  ಹೊರಬರಲು ಆಹ್ವಾನಿಸಿದಂತಾಯ್ತು. ಎದ್ದು ಛತ್ರಿ ತೆಗೊಂಡು ಹೊರಬಂದು ಹಾಗೆಯೇ ಬರಿಗಾಲಲ್ಲಿ ಅಂಗಳದಲ್ಲಿ ನಿಂತು, ನೀರಿನ ಗುಳ್ಳೆಗಳ ಸಾಲು ನೋಡುತ್ತಾ ನಿಂತು ಬಿಟ್ಟೆ. ಹಾಗೆ ದೃಷ್ಟಿ  ಬಿದ್ದದ್ದು ಹುಲ್ಲಿನ ಮೇಲಿರುವ ಆ ಕೆಂಪು ಕೀಟದ ಮೇಲೆ. ಕೇವಲ ಮಳೆಗಾಲದಲ್ಲಿ ಮಾತ್ರ ನಾ ಆ  ಕೀಟವನ್ನು ಕಂಡಿದ್ದು. ಹೆಸರು ಇನ್ನು ಗೊತ್ತಿಲ್ಲ ಆದ್ರೆ ಮಳೆ ಹನಿಗಳೊಂದಿಗೆ ಅವುಗಳು ಆಕಾಶದಿಂದ ಬೀಳುತ್ತವೆ ಎಂದು ಸಣ್ಣದಿರುವಾಗ ಯಾರೋ ಹೇಳಿದ ನೆನಪು. ಬಲಕ್ಕೆ ತಿರುಗಿದರೆ ನನ್ನ ತರಕಾರಿ ತೋಟ. ಬಾಳೆ, ತೆಂಗು, ಮಾವಿನ ಮರಗಳು ಮಳೆಗೆ ಮೈ ಒಡ್ಡಿ ನಿಂ