Skip to main content

Posts

Showing posts from 2017

ಫೀಸ್ ಜಾಸ್ತಿಯಾಗಲು ಕಾರಣ ಪಾಪದವರು ವಿದ್ಯಾವಂತರಾಗ ಬೇಕೆನ್ನುವುದರಿಂದ ಅಂತೆ !!!

ಅದೊಂದು ಸಮಾರಂಭದಲ್ಲಿ ನನ್ನ ಸುತ್ತಮುತ್ತ  ಕೆಲವು ಹೆಂಗಸರು ಕೂತು ಮಾತಾಡುತ್ತಿದ್ದರು. ಹೆಂಗಸು ೧ : (ಪಕ್ಕದಲ್ಲಿ ಕೂತಿದ್ದ ಹುಡುಗಿಯನ್ನ ) "ಏನಮ್ಮ ಏನ್ ಕಲಿತಿದ್ದೀಯಾ ?" ಹೆಂಗಸು ೨ : "ಅವಳನ್ನ ಇಂಜಿನಿಯರಿಂಗ್ ಗೆ ಸೇರಿಸಿದ್ದೀವಿ. ಇನ್ನು ಮುಂದಿನ ವಾರ ಕ್ಲಾಸ್ಸ್ ಸ್ಟಾರ್ಟ್ ಆಗುತ್ತೆ." ಮಗಳಿಗೆ ಕೇಳಿದ ಪ್ರಶ್ನೆಗೆ ತಾಯಿ ಉತ್ತರಿಸಿದರು. ಮಗಳು ತನ್ನ ಮೊಬೈಲ್ ಲೋಕದಲ್ಲಿ ಮುಳುಗಿ ಹೋಗಿದ್ದಳು. ತನ್ನ ಸುತ್ತಮುತ್ತ ಇರುವ ಜನರನ್ನ ಮಾತಾಡಿಸುವದಕ್ಕಿಂತ ಪೊಕೀಮೋನ್ ಹಿಡಿಯುದರಲ್ಲಿ ಬ್ಯುಸಿ ಆಗಿದ್ದಳು. ಹೆಂಗಸು ೧ : "ಒಹ್! ಹಾಗೇನು .ಅಂದ್ರೆ  ಪಿಯುಸಿ ಯಲ್ಲಿ ಒಳ್ಳೆ ಮಾರ್ಕ್ಸ್ ಬಂದಿರ್ಬೇಕಲ್ಲ? ಒಳ್ಳೇದು ." ಹೆಂಗಸು ೨ : "ಇಲ್ಲ ಕಣ್ರೀ . ಫೇಲ್ ಆಗಿದ್ರು ಫೇಲ್ ಆದ್ಲು ಎಂದು ಹೇಳೋಕ್ಕೆ ನಾನು ಸಂಕೋಚ ಪಡ್ತಿರ್ಲಿಲ್ಲ. ಅಷ್ಟು ಕಮ್ಮಿ ಮಾರ್ಕ್ಸ್ ತೆಗ್ದಿದ್ದಾಳೆ ನೋಡಿ. ನಮಗೆ ಅವಳು ಇಂಜಿನಿಯರಿಂಗ್ ಮಾಡಬೇಕೆಂಬುದು ಆಸೆ. ಬಿ ಎಸ್ಸಿ ಎಲ್ಲ ಕಲಿತರೆ ಏನು ಸಿಗ್ತದೆ ಹೇಳಿ. ಹಾಗೆ ಮಂಗಳೂರಲ್ಲೇ ಒಂದು ಕಾಲೇಜು ಗೆ  ಮ್ಯಾನೇಜ್ಮೆಂಟ್ ಸೀಟ್ ಅಲ್ಲಿ ಆರ್ಕಿಟೆಕ್ಚರ್ ಗೆ ಸೇರಿಸಿದ್ದೀವಿ. ಈ ಕೋರ್ಸ್ ಗೆ ಸೇರಿದ್ರೆ ೨ ಸಲ ಟೂರ್ ಗೆ ಹೋಗಬಹುದು ಅಂತ ಅವಳ ಗೆಳೆಯರು ಹೇಳಿದ್ದಾರಂತೆ. " ಹೆಂಗಸು ೧: "ಅದಕ್ಕೇನಂತೆ ಬಿಡಿ. ಇರುವುದು ಒಬ್ಬಳು ಮಗಳು ,  ಕಲೀಲಿ. " ಹೆಂಗಸು ೨: "ಏನೋ ಅವ

ಕ್ಷಮಿಸಿ ಟೀಚರ್ ...!

ಆವತ್ತು ಎಂದಿನಂತೆ ಕಾಲೇಜಿಗೆ ಹೋಗಲು ಬಸ್ಸಿಗೆ ಕಾಯುತ್ತಿದ್ದೆ. ಅದು ಯಾವತ್ತೂ ಮರೆಯದ ದಿನವಾಗುತ್ತದೆಂದು ಕನಸಲ್ಲೂ ಎಣಿಸಿರಲಿಲ್ಲ . ತಪ್ಪು ಎನ್ನುವುದಕ್ಕಿಂತ ಏನೋ ಪಾಪ ಮಾಡಿದ್ದೇನೆ ಎಂಬ ಭೀತಿ ಇಂದಿಗೂ ನನ್ನನ್ನು ಕಾಡುತ್ತಿದೆ. ನನ್ಮುಂದೆ ಬಸ್ಸೊಂದು ನಿಂತಿತ್ತು. ಶಾಲಾ ಮಕ್ಕಳು ಪ್ರವಾಸಕ್ಕೆ ಹೊರಟಿರುವುದೆಂದು ಬಸ್ಸು ನೋಡಿದಾಗ  ತಿಳಿಯಿತು. ನಾನೋ ಇದನೆಲ್ಲ ನೋಡುತಿದ್ದರು ನನ್ನ ಮನಸ್ಸು ಏನೋ ಬೇರೆ ಕಡೆಯೇ ತೇಲಿದಂತ ಅನುಭವ. ಆ ಬಸ್ಸಿನ ಕಿಟಕಿಯಿಂದ  ಸುಮಾರು ಇಪ್ಪತೆಂಟು ಮೂವತ್ತು ವರ್ಷದ ಹುಡುಗಿಯೊಬ್ಬಳು ನನ್ನ ಕಡೆ ನೋಡಿ ಕೈ ಬೀಸಿದಂತೆ ಆಯ್ತು. ಆದರೆ ಯಾರೆಂಬುದು ನನಗೆ ತಿಳಿಯಲೇ ಇಲ್ಲ. ನನ್ನ ನೋಡಿ ಕೈ ಬೀಸಿದಳೋ ಅಲ್ಲ ಪಕ್ಕದಲ್ಲಿರುವವರಿಗೆ ಸನ್ನೆ ಮಾಡುತಿದ್ದಳೊ ತಿಳಿಯಲಿಲ್ಲ.ಆಚೆ ಈಚೆ ನೋಡಿದರೆ ಯಾರು ಅವಳಿಗೆ ಪ್ರತಿಕ್ರಿಯಿಸುತ್ತಿರಲಿಲ್ಲ. ಮತ್ತೆ ಅವಳು ನನ್ನನ್ನೇ ನೋಡ್ತಿದಂತೆ ಅನಿಸಿತು. ಏನು ಯೋಚಿಸುತಿದ್ದೆನೋ ದೇವರಿಗೆ ಗೊತ್ತು. ನಾನು ಅವಳಿಗೆ ಪ್ರತಿಕ್ರಿಯಿಸಲೇ  ಇಲ್ಲ. ನಾನು ಅವಳಿಗೆ ಕೈ ಬೀಸುತಿದ್ದರೆ  ನನ್ನ ಗಂಟೇನು  ಹೋಗುತಿತ್ತು ಎಂದು ಇವತ್ತಿನವರೆಗೂ  ನನ್ನನು ನಾನು ಎಷ್ಟು ಬಾರಿ ಬೈದುಕೊಂಡಿದ್ದೇನೋ ಏನೋ. ಸ್ವಲ್ಪ ಹೊತ್ತಾದ ನಂತರ ಯಾರೋ ಬಸ್ಸಿನಿಂದ ಇಳಿದಂತಾಯ್ತು.  ಇಳಿದವಳನ್ನು ನೋಡಿ ಅವಾಕ್ಕಾದೆ . ನಾನು ಕಲಿತ ಶಾಲೆಯಲ್ಲೇ ನನ್ನ ಕಸಿನ್ ಓದುತ್ತಿದ್ದಳು . ಅವಳು ಬಸ್ಸಿನಿಂದ ಇಳಿದಂತೆ ಕಿಟಕಿ ಬದಿಯಲ್ಲಿದ್ದ

ಹೀಗೆ ಒಂದು ದಿನ ಕನಸಲ್ಲಿ ಕಂಡ ನನ್ನ ಕನಸಿನ ಗುಡಿಸಲು

ಕೃಪೆ : ಗೂಗಲ್ ಇಮೇಜ್ಸ್                       ಮಳೆ ಹನಿಗಳು  ಕಿಟಕಿ ಗಾಜಿಗೆ ಬೀಳುವ ಸದ್ದು ಕೇಳಿ ಎಚ್ಚರವಾಯ್ತು. ಕಣ್ಣು ಬಿಟ್ಟಾಗ ಅಲ್ಲೇ ಮೇಜಲ್ಲಿಟ್ಟ ಬುದ್ಧನ ಮುಗುಳ್ನಗೆ, ಪಕ್ಕದಲ್ಲಿರುವ ಕೃಷ್ಣಾರ್ಜುನರ  ರಥದ ಮಾದರಿ ಕಂಡರೆ  ಏನೋ ಮನಸ್ಸಿಗೆ ಮುದ ನೀಡುವುದು . ಚಿಕ್ಕಂದಿನಿಂದ ಅವೆರಡನ್ನು ಕೊಳ್ಳುವ ಆಸೆ. ಆದರೆ ಎಲ್ಲಿಯೂ ನನಗೆ ಬೇಕಂತಿರುವುದು ಸಿಕ್ಕಿರಲಿಲ್ಲ. ಕಳೆದ ವರ್ಷ ಉಡುಗೊರೆಯಾಗಿ ಪಡೆದಿದ್ದೆ.  ಪರದೆ ಸರಿಸಿ ಕಿಟಕಿ ಹೊರಗೆ ನೋಡಿದ್ರೆ ನಾ ನೆಟ್ಟ ಗುಲಾಬಿ  ಗಿಡದಲ್ಲಿದ್ದ ಒಂದು ಗುಲಾಬಿ ನನ್ನ ನೋಡಿ ನಕ್ಕಂತೆ ಕಾಣುತಿತ್ತು. ಹೂವೆಂದರೆ  ಪಂಚಪ್ರಾಣ. ಮಲ್ಲಿಗೆಯ ಸುವಾಸನೆ, ಗುಲಾಬಿಯ  ಸೌಂದರ್ಯ ಪದಗಳಲ್ಲಿ  ವರ್ಣಿಸಲು ಅಸಾಧ್ಯ.  ಮಳೆ ಬಿದ್ದಾಗ  ಆ ಮಣ್ಣಿನ ಸುವಾಸನೆ ನನ್ನನ್ನು ಮನೆಯಿಂದ  ಹೊರಬರಲು ಆಹ್ವಾನಿಸಿದಂತಾಯ್ತು. ಎದ್ದು ಛತ್ರಿ ತೆಗೊಂಡು ಹೊರಬಂದು ಹಾಗೆಯೇ ಬರಿಗಾಲಲ್ಲಿ ಅಂಗಳದಲ್ಲಿ ನಿಂತು, ನೀರಿನ ಗುಳ್ಳೆಗಳ ಸಾಲು ನೋಡುತ್ತಾ ನಿಂತು ಬಿಟ್ಟೆ. ಹಾಗೆ ದೃಷ್ಟಿ  ಬಿದ್ದದ್ದು ಹುಲ್ಲಿನ ಮೇಲಿರುವ ಆ ಕೆಂಪು ಕೀಟದ ಮೇಲೆ. ಕೇವಲ ಮಳೆಗಾಲದಲ್ಲಿ ಮಾತ್ರ ನಾ ಆ  ಕೀಟವನ್ನು ಕಂಡಿದ್ದು. ಹೆಸರು ಇನ್ನು ಗೊತ್ತಿಲ್ಲ ಆದ್ರೆ ಮಳೆ ಹನಿಗಳೊಂದಿಗೆ ಅವುಗಳು ಆಕಾಶದಿಂದ ಬೀಳುತ್ತವೆ ಎಂದು ಸಣ್ಣದಿರುವಾಗ ಯಾರೋ ಹೇಳಿದ ನೆನಪು. ಬಲಕ್ಕೆ ತಿರುಗಿದರೆ ನನ್ನ ತರಕಾರಿ ತೋಟ. ಬಾಳೆ, ತೆಂಗು, ಮಾವಿನ ಮರಗಳು ಮಳೆಗೆ ಮೈ ಒಡ್ಡಿ ನಿಂ

ಅಂದು ಮತ್ತು ಇಂದು .

ಒಂದು ವರ್ಷ ಆಯ್ತು ಮನೆಯಿಂದ ದೂರ  ಇದ್ದು. ಒಂದು ವರ್ಷದೊಳಗೆ ಹಲವಾರು ರೀತಿಯ ಜನರನ್ನು ಭೇಟಿಯಾದರೂ , ಬೇರೆ ಬೇರೆ ಸಂಸ್ಕೃತಿಯ ಪರಿಚಯವಾದರೂ ನಾವು ಹುಟ್ಟಿ ಬೆಳೆದ  ಊರಿನ  ಬದುಕಿನ ಶೈಲಿ, ಅಲ್ಲಿನ ಸಂಸ್ಕೃತಿಯೇ ನಮಗೆ ಶ್ರೇಷ್ಠವೆನಿಸುತ್ತದೆ. ಮನೆಯಲ್ಲಿ ಇರ್ಬೇಕಿದ್ರೆ ಅಮ್ಮ ಉಪ್ಪಿಟ್ಟು ಮಾಡಿದರೆ ಅಯ್ಯೋ ಉಪ್ಪಿಟ್ಟಾ ಎಂದು, ದೋಸೆ ಮಾಡಿದರೆ ದಿನಾಲು ದೋಸೆ ಯಾಕಮ್ಮ ನಿನ್ನೆ  ತಾನೇ ಮಾಡಿದ್ರಿ ಎಂದು ಅಮ್ಮನ ಮೇಲೆ ರೇಗಿಬಿಡುವುದು ರೂಢಿಯಾಗಿತ್ತು. ಸೌತೆಕಾಯಿ ಪಲ್ಯವಾದರೆ ಹಸಿವಿಲ್ಲ ಎಂದು ಹಸಿವಲ್ಲೇ ಮಲಗಿಬಿಡುವುದೂ ಇತ್ತು. ಆದರೆ ಇಂದು ಬೆಳಗ್ಗಿನಿಂದ ರಾತ್ರಿಯವರೆಗೂ ಮೂರುಹೊತ್ತೂ ರೋಟಿ-ದಾಲ್ ತಿಂದರೂ ಬೇಸರವಿಲ್ಲ. ಬೇಸರವಿಲ್ಲ ಎನ್ನುವುದಕ್ಕಿಂತ ಅದಕ್ಕೆ ಒಗ್ಗಿಕೊಂಡುಬಿಟ್ಟಿದೇನೆ ಎಂದರೆ ಸರಿಯಾದೀತು. ಈಗ ಮನೆಗೆ ಹೋದರೆ ಅಮ್ಮ ಗಂಜಿ ಊಟ ಬಡಿಸಿದರೂ ಹಬ್ಬದೂಟ ತಿಂದಷ್ಟು ತೃಪ್ತಿ. ಏಳಲು ಅಲಾರ್ಮ್ ಬೇಕಿರಲಿಲ್ಲ, ಹಕ್ಕಿಗಳ ಇಂಚರಕ್ಕೆ ಅಮ್ಮ ಎದ್ದರೆ, ಅಮ್ಮನ ಧ್ವನಿಗೆ ಮಕ್ಕಳೆಲ್ಲಾ ಎದ್ದು ಬಿಡುತಿದ್ವಿ. ಎದ್ದು ಹೋಗಿ ಮನೆ ಹೊರಗೆ ಜಗಲಿಯಲ್ಲಿ ಕೂತು ಸೂರ್ಯೋದಯ, ಗದ್ದೆಯಲ್ಲಿ ಭತ್ತದ ತೆನೆ, ಅಂಗಳದಲ್ಲಿ ಅರಳಿ ನಿಂತ ಹೂವು, ಗದ್ದೆಯ ಬದಿಯಿಂದ ಸಾಲಾಗಿ ಹೋಗುತ್ತಿರುವ ನವಿಲುಗಳನ್ನು ನೋಡ್ಕೊಂಡು  ಕುಳಿತುಕೊಳ್ಳುವದು ದಿನಚರಿ. ಹಾಗೆ ಕುಳಿತುಕೊಂಡರೆ ಮತ್ತೆ ಏಳುವುದು 'ಕಾಲೇಜಿಗೆ ನಂಗೆ ಹೋಗ್ಲಿಕ್ಕಾ  ಅಲ್ಲಾ  ನಿನಗ  , ಹೊರಡುವ ಯೋಚನೆ ಇ

ಕಲೆ !

ಏನಮ್ಮ ನೀವು ಇಡೀ ದಿವಸ ಯಕ್ಷಗಾನ ಅಂದ್ಕೊಂಡು, ರಿಮೋಟ್ ಕೊಡಿ ಎಂದು ಟಿವಿ ರಿಮೋಟ್ ಅಮ್ಮನಿಂದ ತಗೊಂಡು ಕಲರ್ಸ್ ಅಲ್ಲಿ ಬರುವ ಬಿಗ್ ಬಾಸ್ ಕಾರ್ಯಕ್ರಮ ನೋಡ್ಕೊಂಡು ಕುಳಿತೆ. ಇಂದಿನ ಮಕ್ಕಳಿಗೆ ನಮ್ಮ ಕಲೆ ಸಂಸ್ಕೃತಿ ಏನು ಬೇಕಿಲ್ಲ ಎಂದು ಗೊಣಗುತ್ತ ಅಡಿಗೆ ಕೋಣೆಯೊಳಗೆ ಸೇರಿಬಿಟ್ಟರು ಅಮ್ಮ . ಇದು ಒಂದು ವರ್ಷದ ಹಿಂದಿನ ಮಾತು. ಇಂದು ಪರ ಊರಲ್ಲಿ ಇದ್ದುಕೊಂಡು  ತುಳು , ಕನ್ನಡ ಮಾತಾಡುವವರು ಸಿಕ್ಕಿದರೆ, ನಮ್ಮೂರಿನವರು ಎಂದು ಮಂಗಳೂರಿನ ಬಗ್ಗೆ ಮಾತಾಡಲು ಶುರುಮಾಡ್ತೀವಿ. ಯಕ್ಷಗಾನದ ಬಗ್ಗೆ ನಮಗೆ ಗೊತ್ತಿರುವುದು ಚೆಂಡೆಯ ಸದ್ದು, ಮುಖಕ್ಕೆ ಒಂದಷ್ಟು ಬಣ್ಣ ಬಳಿದುಕೊಂಡು ಇಡೀ ರಾತ್ರಿ ನಲಿಯುವ ಒಂದು ಕಲೆ ಎಂಬುದಷ್ಟು ಬಿಟ್ಟು ಸುಮಾರು ಮಂದಿಗೆ  ಅದ್ರ ಬಗ್ಗೆ ಸಾಸಿವೆ ಕಾಳಷ್ಟು ಗೊತ್ತಿಲ್ಲ ಎಂಬುದು ಕಹಿ ಸತ್ಯ. ಇತೀಚೆಗಷ್ಟೇ 'ಪಿಲಿಬೈಲ್ ಯಮುನಕ್ಕ' ಎಂಬ ಸಿನಿಮಾ ಬಿಡಿಗಡೆ ಯಾಗಿತ್ತು. 'ಮಾಯಕದೊಂಜಿ ಪೊನ್ನ ಗಾಳಿ ಬೀಜಿಂದ್ ಗೆ ' ಎಂದು ಪಟ್ಲಾ ಸತೀಶ್ ಶೆಟ್ಟಿ  ಯವರು ಹಾಡಿದ್ದಾರೆ.  ಈ ಹಾಡಿನಿಂದಾಗಿ ಪಟ್ಲಾ ಸತೀಶ್ ಶೆಟ್ಟಿ ಯವರು ಮಂಗಳೂರಿನ ಯುವ  ಜನತೆಯಲ್ಲಿ ಮನೆ ಮಾತಾದರು . ಯಕ್ಷಗಾನ ಕಲೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟಿರುವ ಈ ದಿಗ್ಗಜನ ಪರಿಚಯ ಸಿನಿಮಾ ದ ಮೂಲಕ ಯುವಜನತೆಯ  ಕಣ್ಣೆದುರಿಗೆ ಬಂತು. ಹೀಗೆ ಯೂಟ್ಯುಬ್ಗ್ ಅಲ್ಲಿ ಅವರ ಈ ಹಾಡುಗಳನ್ನು ಕೇಳುತಿರಬೇಕಿದ್ರೆ ಮೂಡಬಿದ್ರೆಯ  'ಯಕ್ಷ ದ್ರುವ ಪಟ್ಲಾ

ಜೀವನ ಎಂಬ ಈ ಪ್ರಯಾಣದಲ್ಲಿ ಸಾಗುತ್ತಿದ್ದಂತೆ ...!

ದೀಪಾವಳಿಯ ರಜೆ ಮುಗಿಯಿತು, ಮನಸ್ಸು ಒಪ್ಪದಿದ್ದರು ಮನೆಯಿಂದ ಹೊರಡಲೇ ಬೇಕು. ಇತ್ತೀಚೆಗಷ್ಟೇ ಕಾಲೇಜು ಮುಗಿಸಿ ಕೆಲಸದ ನಿಮಿತ್ತ ಮೈಸೂರಲ್ಲಿ ಟ್ರೈನಿಂಗ್ ಮುಗಿಸಿಕೊಂಡು  ಹೈದೆರಾಬಾದಿಗೆ ಟ್ರಾನ್ಸ್ಫರ್ ಆಗಿತ್ತು. ಕಾಲೇಜಲ್ಲಿ ಇರಬೇಕಿದ್ದರೆ ಮನೆಯಿಂದ ದೂರ ಇರಬೇಕು, ಬ್ಯಾಚುಲರ್ ಲೈಫ್ ಅಂದರೆ ಏನೆಂಬುದು ಅನುಭವಿಸಬೇಕೆಂಬ ಕಾತುರ. ಆದರೆ  ಈಗ ಮನೆಗೆ ಹೊರಡಲು ತುದಿಗಾಲಲ್ಲಿ ನಿಲ್ಲುತ್ತೇವೆ, ರಜೆ ಮುಗಿಸಿಕೊಂಡು ಮನೆಯಿಂದ ಹಿಂದೆ ಹೊರಡಬೇಕಿದ್ದರೆ  ಮನಸ್ಸು ಭಾರವಾಗುತ್ತದೆ. ಮನೆಯಿಂದ ಸುಮಾರು ಮೂರು ಗಂಟೆಗೆ ಬಸ್ಸು ಹತ್ತಿದ್ದೆ. ಪ್ರಯಾಣಿಸುವಾಗ ಕಿಟಕಿ ಬದಿಯಲ್ಲಿ ಕೂರುವುದಂದ್ರೆ  ಅದೇನೋ  ನನಗೆ ಚಿಕ್ಕಂದಿನಿಂದ ಇಷ್ಟವಾಗಿತ್ತು. ಶಾಲೆಗೆ ಬಸ್ಸಲ್ಲಿ ಹೊರಡಬೇಕಿದ್ದರೆ ಕಿಟಕಿ ಬದಿಯಲ್ಲಿ  ಕೂರಲು ಅಣ್ಣನೊಡನೆ ಜಗಳವಾಡುವುದು ರೂಢಿಯಾಗಿತ್ತು. ನನ್ನ ಸೀಟ್ ಹುಡುಕುತ್ತ ಹೋಗಿ ನೋಡಿದರೆ ಅಲ್ಲಿ ಒಬ್ಬಳು, ಕಿವಿಗೆ  ಇಯರ್ ಫೋನ್  ಸಿಕ್ಕಿಸಿಕೊಂಡು ಅವಳ  ಲೋಕದಲ್ಲೇ ಮಗ್ನಳಾಗಿ ಕೂತಿದ್ದಳು. ಕಿಟಿಕಿ ಬದಿ ಕೂರಬೇಕೆಂದರೆ ಈಗಲೂ ನನ್ನೊಳಗಿರುವ ಆ ಹಠಾತ್ತಾದ ಪುಟ್ಟ ಹುಡುಗಿ ಎದ್ದು ಬಿಡುತ್ತಾಳೆ. ಅಲ್ಲಿ ಕೂತಿದ್ದವಳು ನನ್ನನ್ನು  ನೋಡಿ ಪಕ್ಕಕ್ಕೆ ಸರಿದಳು. ನನ್ನೊಳಗಿರುವ  ಆ  ಪುಟ್ಟ  ಹುಡುಗಿ  ನಲಿಯುತಿದ್ದಳು  ಖುಷಿಯಿಂದ. ಬಸ್ ಹೊತ್ತಿಗಿಂತ ಬೇಗನೆ ಬಂದಿದ್ದರಿಂದ ಅಲ್ಲೇ ನಿಂತಿತ್ತು . ಬಸ್ ಹೊರಡಬೇಕಿದ್ದರೆ ನನ್ ಕಾಲೇಜ್ ಬ್ಯಾಚ್ ಮೇಟ್ ಒಬ್ಬ