Skip to main content

Posts

Showing posts from June, 2017

ಕ್ಷಮಿಸಿ ಟೀಚರ್ ...!

ಆವತ್ತು ಎಂದಿನಂತೆ ಕಾಲೇಜಿಗೆ ಹೋಗಲು ಬಸ್ಸಿಗೆ ಕಾಯುತ್ತಿದ್ದೆ. ಅದು ಯಾವತ್ತೂ ಮರೆಯದ ದಿನವಾಗುತ್ತದೆಂದು ಕನಸಲ್ಲೂ ಎಣಿಸಿರಲಿಲ್ಲ . ತಪ್ಪು ಎನ್ನುವುದಕ್ಕಿಂತ ಏನೋ ಪಾಪ ಮಾಡಿದ್ದೇನೆ ಎಂಬ ಭೀತಿ ಇಂದಿಗೂ ನನ್ನನ್ನು ಕಾಡುತ್ತಿದೆ. ನನ್ಮುಂದೆ ಬಸ್ಸೊಂದು ನಿಂತಿತ್ತು. ಶಾಲಾ ಮಕ್ಕಳು ಪ್ರವಾಸಕ್ಕೆ ಹೊರಟಿರುವುದೆಂದು ಬಸ್ಸು ನೋಡಿದಾಗ  ತಿಳಿಯಿತು. ನಾನೋ ಇದನೆಲ್ಲ ನೋಡುತಿದ್ದರು ನನ್ನ ಮನಸ್ಸು ಏನೋ ಬೇರೆ ಕಡೆಯೇ ತೇಲಿದಂತ ಅನುಭವ. ಆ ಬಸ್ಸಿನ ಕಿಟಕಿಯಿಂದ  ಸುಮಾರು ಇಪ್ಪತೆಂಟು ಮೂವತ್ತು ವರ್ಷದ ಹುಡುಗಿಯೊಬ್ಬಳು ನನ್ನ ಕಡೆ ನೋಡಿ ಕೈ ಬೀಸಿದಂತೆ ಆಯ್ತು. ಆದರೆ ಯಾರೆಂಬುದು ನನಗೆ ತಿಳಿಯಲೇ ಇಲ್ಲ. ನನ್ನ ನೋಡಿ ಕೈ ಬೀಸಿದಳೋ ಅಲ್ಲ ಪಕ್ಕದಲ್ಲಿರುವವರಿಗೆ ಸನ್ನೆ ಮಾಡುತಿದ್ದಳೊ ತಿಳಿಯಲಿಲ್ಲ.ಆಚೆ ಈಚೆ ನೋಡಿದರೆ ಯಾರು ಅವಳಿಗೆ ಪ್ರತಿಕ್ರಿಯಿಸುತ್ತಿರಲಿಲ್ಲ. ಮತ್ತೆ ಅವಳು ನನ್ನನ್ನೇ ನೋಡ್ತಿದಂತೆ ಅನಿಸಿತು. ಏನು ಯೋಚಿಸುತಿದ್ದೆನೋ ದೇವರಿಗೆ ಗೊತ್ತು. ನಾನು ಅವಳಿಗೆ ಪ್ರತಿಕ್ರಿಯಿಸಲೇ  ಇಲ್ಲ. ನಾನು ಅವಳಿಗೆ ಕೈ ಬೀಸುತಿದ್ದರೆ  ನನ್ನ ಗಂಟೇನು  ಹೋಗುತಿತ್ತು ಎಂದು ಇವತ್ತಿನವರೆಗೂ  ನನ್ನನು ನಾನು ಎಷ್ಟು ಬಾರಿ ಬೈದುಕೊಂಡಿದ್ದೇನೋ ಏನೋ. ಸ್ವಲ್ಪ ಹೊತ್ತಾದ ನಂತರ ಯಾರೋ ಬಸ್ಸಿನಿಂದ ಇಳಿದಂತಾಯ್ತು.  ಇಳಿದವಳನ್ನು ನೋಡಿ ಅವಾಕ್ಕಾದೆ . ನಾನು ಕಲಿತ ಶಾಲೆಯಲ್ಲೇ ನನ್ನ ಕಸಿನ್ ಓದುತ್ತಿದ್ದಳು . ಅವಳು ಬಸ್ಸಿನಿಂದ ಇಳಿದಂತೆ ಕಿಟಕಿ ಬದಿಯಲ್ಲಿದ್ದ

ಹೀಗೆ ಒಂದು ದಿನ ಕನಸಲ್ಲಿ ಕಂಡ ನನ್ನ ಕನಸಿನ ಗುಡಿಸಲು

ಕೃಪೆ : ಗೂಗಲ್ ಇಮೇಜ್ಸ್                       ಮಳೆ ಹನಿಗಳು  ಕಿಟಕಿ ಗಾಜಿಗೆ ಬೀಳುವ ಸದ್ದು ಕೇಳಿ ಎಚ್ಚರವಾಯ್ತು. ಕಣ್ಣು ಬಿಟ್ಟಾಗ ಅಲ್ಲೇ ಮೇಜಲ್ಲಿಟ್ಟ ಬುದ್ಧನ ಮುಗುಳ್ನಗೆ, ಪಕ್ಕದಲ್ಲಿರುವ ಕೃಷ್ಣಾರ್ಜುನರ  ರಥದ ಮಾದರಿ ಕಂಡರೆ  ಏನೋ ಮನಸ್ಸಿಗೆ ಮುದ ನೀಡುವುದು . ಚಿಕ್ಕಂದಿನಿಂದ ಅವೆರಡನ್ನು ಕೊಳ್ಳುವ ಆಸೆ. ಆದರೆ ಎಲ್ಲಿಯೂ ನನಗೆ ಬೇಕಂತಿರುವುದು ಸಿಕ್ಕಿರಲಿಲ್ಲ. ಕಳೆದ ವರ್ಷ ಉಡುಗೊರೆಯಾಗಿ ಪಡೆದಿದ್ದೆ.  ಪರದೆ ಸರಿಸಿ ಕಿಟಕಿ ಹೊರಗೆ ನೋಡಿದ್ರೆ ನಾ ನೆಟ್ಟ ಗುಲಾಬಿ  ಗಿಡದಲ್ಲಿದ್ದ ಒಂದು ಗುಲಾಬಿ ನನ್ನ ನೋಡಿ ನಕ್ಕಂತೆ ಕಾಣುತಿತ್ತು. ಹೂವೆಂದರೆ  ಪಂಚಪ್ರಾಣ. ಮಲ್ಲಿಗೆಯ ಸುವಾಸನೆ, ಗುಲಾಬಿಯ  ಸೌಂದರ್ಯ ಪದಗಳಲ್ಲಿ  ವರ್ಣಿಸಲು ಅಸಾಧ್ಯ.  ಮಳೆ ಬಿದ್ದಾಗ  ಆ ಮಣ್ಣಿನ ಸುವಾಸನೆ ನನ್ನನ್ನು ಮನೆಯಿಂದ  ಹೊರಬರಲು ಆಹ್ವಾನಿಸಿದಂತಾಯ್ತು. ಎದ್ದು ಛತ್ರಿ ತೆಗೊಂಡು ಹೊರಬಂದು ಹಾಗೆಯೇ ಬರಿಗಾಲಲ್ಲಿ ಅಂಗಳದಲ್ಲಿ ನಿಂತು, ನೀರಿನ ಗುಳ್ಳೆಗಳ ಸಾಲು ನೋಡುತ್ತಾ ನಿಂತು ಬಿಟ್ಟೆ. ಹಾಗೆ ದೃಷ್ಟಿ  ಬಿದ್ದದ್ದು ಹುಲ್ಲಿನ ಮೇಲಿರುವ ಆ ಕೆಂಪು ಕೀಟದ ಮೇಲೆ. ಕೇವಲ ಮಳೆಗಾಲದಲ್ಲಿ ಮಾತ್ರ ನಾ ಆ  ಕೀಟವನ್ನು ಕಂಡಿದ್ದು. ಹೆಸರು ಇನ್ನು ಗೊತ್ತಿಲ್ಲ ಆದ್ರೆ ಮಳೆ ಹನಿಗಳೊಂದಿಗೆ ಅವುಗಳು ಆಕಾಶದಿಂದ ಬೀಳುತ್ತವೆ ಎಂದು ಸಣ್ಣದಿರುವಾಗ ಯಾರೋ ಹೇಳಿದ ನೆನಪು. ಬಲಕ್ಕೆ ತಿರುಗಿದರೆ ನನ್ನ ತರಕಾರಿ ತೋಟ. ಬಾಳೆ, ತೆಂಗು, ಮಾವಿನ ಮರಗಳು ಮಳೆಗೆ ಮೈ ಒಡ್ಡಿ ನಿಂ